
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯಕ್ಕೆ ಆಗಮಿಸಿರುವ ಜರ್ಮನಿಯ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸ್ವಾಗತಿಸಿದರು.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಸಚಿವರು, ಕರ್ನಾಟಕ–ಜರ್ಮನಿ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿ, ಸುಸ್ಥಿರ ಬೆಳವಣಿಗೆಯ ದಾರಿಯಲ್ಲಿ ನಮ್ಮ ಸಹಕಾರವನ್ನು ಗಾಢಗೊಳಿಸಲು ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa