ಸಿದ್ಧರಾಮೇಶ್ವರರ ಜೀವನ–ಸಾಧನೆಗಳು ಸಮಾಜಕ್ಕೆ ಪ್ರೇರಣೆ : ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಧಾರವಾಡ, 14 ಜನವರಿ (ಹಿ.ಸ.) : ಆ್ಯಂಕರ್ : ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಮತ್ತು ಸಾಧನೆಗಳು ಸಮಾಜದ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿವೆ. ಧರ್ಮ, ಸೇವೆ ಮತ್ತು ಶ್ರದ್ಧೆಯ ಮೌಲ್ಯಗಳನ್ನು ಅವರು ತಮ್ಮ ಬದುಕಿನ ಮೂಲಕ ಸಮಾಜಕ್ಕೆ ತಿಳಿಸಿಕೊಟ್ಟ ಮಹಾನ್ ಶರಣರು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ
Jayanti


ಧಾರವಾಡ, 14 ಜನವರಿ (ಹಿ.ಸ.) :

ಆ್ಯಂಕರ್ : ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಮತ್ತು ಸಾಧನೆಗಳು ಸಮಾಜದ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿವೆ. ಧರ್ಮ, ಸೇವೆ ಮತ್ತು ಶ್ರದ್ಧೆಯ ಮೌಲ್ಯಗಳನ್ನು ಅವರು ತಮ್ಮ ಬದುಕಿನ ಮೂಲಕ ಸಮಾಜಕ್ಕೆ ತಿಳಿಸಿಕೊಟ್ಟ ಮಹಾನ್ ಶರಣರು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿವಯೋಗಿ ಶ್ರೀ ಸಿದ್ಧರಾಮೇಶ್ವರರು ತಮ್ಮ ಜೀವನದ ಮೂಲಕ ಸಮಾಜದಲ್ಲಿ ಅಪಾರ ಬದಲಾವಣೆಗೆ ಕಾರಣರಾಗಿದ್ದಾರೆ. ಅವರ ಸಾಧನೆಗಳನ್ನು ಸ್ಮರಿಸಿ ಗೌರವಿಸುವುದರ ಜೊತೆಗೆ, ಅವರ ಮಾರ್ಗದರ್ಶನವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು. ಸಿದ್ಧರಾಮೇಶ್ವರರ ಚಿಂತನೆಗಳು ನಮ್ಮ ಭವಿಷ್ಯಕ್ಕೆ ದಾರಿದೀಪವಾಗಬೇಕು ಎಂದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ ಮಾತನಾಡಿ, ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಮತ್ತು ಬೋಧನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ. ಧರ್ಮ, ಶ್ರದ್ಧೆ ಮತ್ತು ಸೇವೆಯ ಮಹತ್ವವನ್ನು ಅವರು ಪ್ರತಿಪಾದಿಸಿ ಸಮುದಾಯವನ್ನು ಪ್ರೇರೇಪಿಸಿದ್ದಾರೆ ಎಂದರು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನ್ಯಾಯ, ಗೌರವ ಮತ್ತು ಸಹನೆ ತುಂಬಿದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಹುಬ್ಬಳ್ಳಿ–ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಮಾತನಾಡಿ, ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನವು ನಿಷ್ಠೆ, ಧರ್ಮ ಮತ್ತು ಸೇವೆಯ ಮಹತ್ವವನ್ನು ನಮಗೆ ಕಲಿಸುತ್ತದೆ. ತಮ್ಮ ಜ್ಞಾನ ಮತ್ತು ಸಾಧನೆಯ ಮೂಲಕ ಸಮಾಜದಲ್ಲಿ ಮಹತ್ವದ ಬದಲಾವಣೆಗಳನ್ನು ತಂದ ಅವರು, ಸಾಮಾಜಿಕ ನ್ಯಾಯ, ಪ್ರಗತಿ ಮತ್ತು ಸಹಬಾಳ್ವೆಗೆ ಉತ್ತೇಜನ ನೀಡಿದ್ದಾರೆ ಎಂದರು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ರವಿ ಶೇಷಗಿರಿ ಅವರು ಕಾರ್ಯಕ್ರಮದಲ್ಲಿ ಶ್ರೀ ಸಿದ್ಧರಾಮೇಶ್ವರರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ–ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಂಜುನಾಥ ಎಲ್. ಭೋವಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ಹ. ಮುತ್ತಳ್ಳಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ಮಹಾನಗರ ಪಾಲಿಕೆ ಸದಸ್ಯ ತುಳಸಪ್ಪ ಪೂಜಾರ ವಂದಿಸಿದರು.

ಸಮಾಜದ ಮುಖಂಡರಾದ ಕಾಶಪ್ಪ ನಾಗಪ್ಪ ಹಿರೇಮನಿ, ಗೋವಿಂದಪ್ಪ ಬಿ. ಬಂಡಿವಡ್ಡರ, ಮಲ್ಲೇಶಿ ಎನ್. ಮುನವಳ್ಳಿ, ಯಲ್ಲಪ್ಪ ಗೋ. ಬಂಡಿವಡ್ಡರ, ಭೀಮಪ್ಪ ಎಫ್. ನೇಮಿಕಲ್, ಮಂಜುನಾಥ ಟಿ. ಹಿರೇಮನಿ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮುದಾಯದ ಹಿರಿಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande