
ಶಿವಮೊಗ್ಗ, 16 ಜನವರಿ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಕ್ಕ ಪಡೆಯು ಶಿವಮೊಗ್ಗ ನಗರದಾದ್ಯಂತ ನಿರಂತರವಾಗಿ ಗಸ್ತು ಕಾರ್ಯ ನಿರ್ವಹಿಸುತ್ತಿದೆ. ಇಂದು ಸಂಜೆ, ನಿಯೋಜಿತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ಗಳು, ಬಸ್ ನಿಲ್ದಾಣಗಳು ಹಾಗೂ ಉದ್ಯಾನವನಗಳ ಸುತ್ತಮುತ್ತ ಗಸ್ತು ನಡೆಸಿ, ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa