
ವಿಜಯಪುರ, 16 ಜನವರಿ (ಹಿ.ಸ.) :
ಆ್ಯಂಕರ್ : ಕಬ್ಬಿಗೆ ಆಕಸ್ಮಿಕವಾಗಿ ಹೊತ್ತಿದ್ದ ಬೆಂಕಿ ನಂದಿಸಲು ಹೋಗಿ ವ್ಯಕ್ತಿಯೊಬ್ಬ ಸಜೀವ ದಹನನಗೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲನಗೌಡ ಬಿರಾದಾರ ಊರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ.
ತಮ್ಮ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಕಬ್ಬು ಭಸ್ಮವಾಗುತ್ತಿತ್ತು. ಅದನ್ನು ನಂದಿಸಲು ಹೋಗಿದ್ದ ಮಲ್ಲನಗೌಡ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ದೇವರಹಿಪ್ಪರಗಿ ಠಾಣೆ ಪೊಲೀಸರು ಭೇಟಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande