
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ.
ರೈಲು ಸಂಖ್ಯೆ 06147 ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 18, 2026 ರಂದು 12:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಮರುದಿನ 03:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ.
ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06148 ಬೆಂಗಳೂರು ಕಂಟೋನ್ಮೆಂಟ್ – ಕೊಟ್ಟಾಯಂ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 19, 2026 ರಂದು 22:20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ನಿಂದ ಹೊರಟು, ಮರುದಿನ ಬೆಳಿಗ್ಗೆ 10:50 ಗಂಟೆಗೆ ಕೊಟ್ಟಾಯಂ ತಲುಪಲಿದೆ.
ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಎರ್ನಾಕುಲಂ ಟೌನ್, ಆಲುವಾ, ತ್ರಿಶೂರ್, ಪಾಲಕ್ಕಾಡ್, ಪೋದನೂರ್, ತಿರುಪ್ಪೂರ್, ಈರೋಡ್, ಸೇಲಂ, ಕುಪ್ಪಂ, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು 24 ಬೋಗಿಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ ಎಸಿ 3-ಟೈರ್ (2), ಸ್ಲೀಪರ್ ಕ್ಲಾಸ್ (18), ಸಾಮಾನ್ಯ ದ್ವಿತೀಯ ದರ್ಜೆ (2) ಮತ್ತು ಎಸ್ಎಲ್ಆರ್/ಡಿ (2) ಸೇರಿವೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa