ಶಿಸ್ತು, ಸಂಯಮ, ಸಮಯ ಪ್ರಜ್ಞೆಗೆ ಕ್ರೀಡೆ ಸಹಕಾರಿ : ಸಿದ್ದರಾಮಯ್ಯ
ನಾನಾ
Cm


ತುಮಕೂರು, 16 ಜನವರಿ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು..

ಅವರು ಇಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026 ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆ ಪಾಲನೆಗೆ ಸಹಕಾರಿ. ರಾಜ್ಯದ ನಾನಾ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಅಭಿನಂದಿಸಿದರು.

ವಿದ್ಯಾರ್ಥಿ ದೆಸೆಯಲ್ಲಿ ಕಬ್ಬಡ್ಡಿ ಪಟುವಾಗಿದ್ದರು ಎಂಬುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅದರೊಂದಿಗೆ ಫುಟ್ ಬಾಲ್, ಕ್ರಿಕೆಟ್ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಏಕದಿನ ಕ್ರಿಕೆಟ್,ಟಿ.-20 ಕ್ರಿಕೆಟ್ ವೀಕ್ಷಿಸುವ ಹವ್ಯಾಸವಿರುವ ಬಗ್ಗೆ ತಿಳಿಸಿದರು.

ಕೆಲಸದೊತ್ತಡದ ನಡುವೆಯೂ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸುವುದನ್ನು ತಪ್ಪಿಸುವುದಿಲ್ಲವೆಂದು ತಿಳಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ.ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ. ಪರಿಶ್ರಮದಿಂದ ಗುರಿ ಸಾಧಿಸಲು ಉತ್ತಮ ತರಬೇತಿ ಅಗತ್ಯ ಎಂದರು.

ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ನಿಯಮವನ್ನು ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಪೇದೆ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯ ವರೆಗೆ ಶೇ.3 ರಷ್ಟು ಮೀಸಲಾತಿಯನ್ನು ಸರ್ಕಾರ ನೀಡುತ್ತಿದೆ. ಒಲಂಪಿಕ್ಸ್ , ಪಾರಾ ಒಲಂಪಿಕ್ಸ್ , ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ/ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ನಾನಾ ಇಲಾಖೆಗಳಲ್ಲಿ ಶೇ.2 ರ ಮೀಸಲಾತಿಯನ್ನು ನೀಡಲಾಗುತ್ತಿದೆ. ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ತುಮಕೂರು ಜಿಲ್ಲೆಗೆ ಹಾಕಿ ಕ್ರೀಡಾಂಗಣ, ವಿಶ್ವದರ್ಜೆಯ ಈಜುಕೊಳದ ಬೇಡಿಕೆಯಿದ್ದು, ಕ್ರೀಡೆಗಾಗಿ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ನೀಡಿದರು. ತುಮಕೂರುಜಿಲ್ಲೆಯಿಂದ ಉತ್ತಮ ಕ್ರೀಡಾಪಟುಗಳು ಹೊರಬಂದು, ವಿಶ್ವಮಟ್ಟದಲ್ಲಿ ನಾಡಿನ ಕೀರ್ತಿಯನ್ನು ಹೆಚ್ಚಿಸಲೆಂದ ಕ್ರೀಡಾಪುಟಗಳಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande