ಉತ್ತರಾಖಂಡಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಡೆಹ್ರಾಡೂನ್, 17 ಜನವರಿ (ಹಿ.ಸ.) : ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಉತ್ತರಾಖಂಡ ರಾಜ್ಯದ ಅಧಿಕೃತ ಭೇಟಿಗಾಗಿ ಶನಿವಾರ ಡೆಹ್ರಾಡೂನ್‌ಗೆ ಆಗಮಿಸಿದರು. ಅವರನ್ನು ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಹಾಗೂ ಮುಖ್ಯಮಂತ್ರಿ ಪು
Uk-vice-President-reached


ಡೆಹ್ರಾಡೂನ್, 17 ಜನವರಿ (ಹಿ.ಸ.) :

ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಉತ್ತರಾಖಂಡ ರಾಜ್ಯದ ಅಧಿಕೃತ ಭೇಟಿಗಾಗಿ ಶನಿವಾರ ಡೆಹ್ರಾಡೂನ್‌ಗೆ ಆಗಮಿಸಿದರು.

ಅವರನ್ನು ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಹಾಗೂ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆತ್ಮೀಯವಾಗಿ ಸ್ವಾಗತಿಸಿದರು.

ಉಪರಾಷ್ಟ್ರಪತಿ ಅವರು ರಾಜ್‌ಪುರ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಸಂಘಟನೆಯೊಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜಧಾನಿ ಡೆಹ್ರಾಡೂನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಮತ್ತು ಆಡಳಿತಾಧಿಕಾರಿಗಳು ಭದ್ರತಾ ಕ್ರಮಗಳನ್ನು ಇನ್ನಷ್ಟು ಬಲಪಡಿಸಿದ್ದು, ಯಾವುದೇ ಅಸೌಕರ್ಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande