
ಬಳ್ಳಾರಿ, 17 ಜನವರಿ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ರಂಗಾಯಣ ಹಾಗೂ ಕೊಪ್ಪಳದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಡಾ.ಡಿ.ಎಸ್.ಚೌಗಲೆ ವಿರಚಿತ ನಾಟಕ `ನಮ್ಮೊಳಗೊಬ್ಬ ಗಾಂಧಿ' ಪ್ರದರ್ಶನ ಕಾರ್ಯಕ್ರಮವನ್ನು ಜನವರಿ 18ರ ಭಾನುವಾರ ಸಂಜೆ 6.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಅವರು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸುವರು. ಸಾಂಸ್ಕøತಿಕ ಚಿಂತಕರು ಹಾಗೂ ಹಿರಿಯ ಸಾಹಿತಿಗಳಾದ ಅಲ್ಲಮ ಪ್ರಭು ಬೆಟ್ಟದೂರು ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೆÇೀಲೀಸ್ ವರಿμÁ್ಠಧಿಕಾರಿ ಡಾ. ರಾಮ್ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಡಾ.ಸಿದ್ದಯ್ಯ ಮರಾಣಿಕ್ ಟ್ರಸ್ಟ್(ರಿ) ಕೊಪ್ಪಳ ಅಧ್ಯಕ್ಷರಾದ ಅಜಮೀರ್ ನಂದಾಪೂರ್, ಸಾಹಿತಿ ಸಾವಿತ್ರಿ ಮುಜುಮ್ದಾರ್, ಯುವ ಸಾಹಿತಿ ಮಹೇಶ್ ಶ್ ಬಳ್ಳಾರಿ, ಕನ್ನಡಾಭಿಮಾನಿ ಅಮೀನ ಸಾಹೇಬ ಮುಲ್ಲಾ ಪಾಲ್ಗೊಳ್ಳುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಅವರು ಉಪಸ್ಥಿತಿವಹಿಸುವರು.
`ನಮ್ಮೊಳಗೊಬ್ಬ ಗಾಂಧಿ' ನಾಟಕದ ಪ್ರದರ್ಶನವು ಚಿದಂಬರರಾವ್ ಜಂಬೆ ಅವರ ನಿರ್ದೇಶನ, ಶಿವಮೊಗ್ಗ ರಂಗಾಯಣದ ರೆಪರ್ಟರಿ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ ಹಾಗೂ ಸಾಹಿತ್ಯ, ಸಾಂಸ್ಕøತಿಕ, ಕಲಾ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಗವಿಸಿದ್ದ ಎನ್. ಬಳ್ಳಾರಿ ಅವರ ಸಹಕಾರದೊಂದಿಗೆ ನಡೆಯಲಿದೆ ಎಂದು ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ., ನಿರ್ದೇಶಕ ಪ್ರಸನ್ನ ಡಿ. ಸಾಗರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್