
ಮೈಸೂರು, 18 ಜನವರಿ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, ವರುಣಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.
ಸಚಿವ ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ವರುಣಾ ವಿಧಾನ ಸಭಾ ಕ್ಷೇತ್ರದ ಮುಖಂಡರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa