
ರಾಯಚೂರು, 02 ಜನವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು ವಿಶೇಷ ಮಧ್ಯಸ್ಥಿಕೆಯ ಅಭಿಯಾನ 2.0 ಅನ್ನು ಜನವರಿ 2ರಿಂದ 90ದಿನಗಳ ಕಾಲ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಧ್ಯಸ್ಥಿಕೆಯ ಅಭಿಯಾನ ನಡೆಯಲಿದೆ .
ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಿ ಅಲ್ಲಿ ವಿಶೇಷ ತರಬೇತಿ ಹೊಂದಿದ ಮಧ್ಯಸ್ಥಿಕೆಗಾರರಿಂದ ರಾಜಿ ಸಂಧಾನ ಮಾಡಿಸುವ ವ್ಯವಸ್ಥೆ ಇದಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ. ಸಾತ್ವಿಕ್ ಅವರು ತಿಳಿಸಿದ್ದಾರೆ.
ಕಕ್ಷಿದಾರರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು. ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಜಿಲ್ಲೆಯ ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಸಿಂಧನೂರು, ಲಿಂಗಸೂಗೂರು, ಮಾನವಿ, ದೇವದುರ್ಗ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್