
ಕೊಪ್ಪಳ, 03 ಜನವರಿ (ಹಿ.ಸ.) :
ಆ್ಯಂಕರ್ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್, ಸಮಗ್ರ ಉದ್ಯಮಿ ಹಾಗೂ ಹಪ್ಪಳ, ಸಂಡಿಗೆ ಮತ್ತು ಮಸಲಾ ಪೌಡರ್ ತಯಾರಿಕಾ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಪರುಷ ಮತ್ತು ಮಹಿಳೆಯರಿಗೆ ಜನವರಿ ತಿಂಗಳಲ್ಲಿ ತರಬೇತಿ ನೀಡಲಾಗುವುದು. ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 15 ಕೊನೆಯ ದಿನವಾಗಿದೆ. ದೂರವಾಣಿ ಮೂಲಕ ಅಥವಾ ವೆಬ್ಸೈಟ್: www.restihaliyal.org ಮೂಲಕವೂ ಅರ್ಜಿ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್