ನಾಳೆ ಗವಿಮಠದ ನಡೆಯುವ ಕಾರ್ಯಕ್ರಮಗಳು
ಕೊಪ್ಪಳ, 04 ಜನವರಿ (ಹಿ.ಸ.) : ಆ್ಯಂಕರ್ : ನಾಳೆ ಸೋಮವಾರ ಬೆಳಿಗ್ಗೆ 04.00 ಮಹಾಮಹಿಮ ಶ್ರೀ ಗವಿಸಿದ್ಧೇಶ್ವರ ಕತೃ ಗದ್ದುಗೆಗೆ ರುದ್ರಾಭಿಷೇಕ ನಡೆಯಲಿದ್ದು,. ಬೆಳಿಗ್ಗೆ 10.30 ಗಂಟೆಗೆ ಗವಿಮಠದ ಆವರಣದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಶ್ವಾನದಳ ಪ್ರದರ್ಶನ ಆಯೋಜಿಸಲಾಗಿದ್ದು ಡಿವೈಎಸ್‍ಪಿ ಮುತ್ತಣ್ಣ ಸವ
ನಾಳೆ  ಗವಿಮಠದ ನಡೆಯುವ ಕಾರ್ಯಕ್ರಮಗಳು


ಕೊಪ್ಪಳ, 04 ಜನವರಿ (ಹಿ.ಸ.) :

ಆ್ಯಂಕರ್ : ನಾಳೆ ಸೋಮವಾರ ಬೆಳಿಗ್ಗೆ 04.00 ಮಹಾಮಹಿಮ ಶ್ರೀ ಗವಿಸಿದ್ಧೇಶ್ವರ ಕತೃ ಗದ್ದುಗೆಗೆ ರುದ್ರಾಭಿಷೇಕ ನಡೆಯಲಿದ್ದು,. ಬೆಳಿಗ್ಗೆ 10.30 ಗಂಟೆಗೆ ಗವಿಮಠದ ಆವರಣದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಶ್ವಾನದಳ ಪ್ರದರ್ಶನ ಆಯೋಜಿಸಲಾಗಿದ್ದು ಡಿವೈಎಸ್‍ಪಿ ಮುತ್ತಣ್ಣ ಸವರಗೋಳ ಅವರು ಶ್ವಾನದಳ ಪ್ರದಶನ ಉದ್ಘಾಟಿಸಲಿದ್ದಾರೆ.

ಕರಾಟೆ ಪ್ರದರ್ಶನವನ್ನು ಮೌನೇಶ್ ಹಾಗೂ ತಂಡದವರಿಂದ ಆಯೋಜನೆ ಮಾಡಲಾಗಿದೆ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಕರಾಟೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ ಮತ್ತು ದಾಲಪಟಾ ಹಾಗೂ ಮೋಜಿನ ಗೊಂಬೆ ಪ್ರದರ್ಶನವನ್ನು ಸಹ ಆಯೋಜಿಸಲಾಗಿದೆ.

ಕೊಪ್ಪಳದ ಜೆಸ್ಕಾಂ ಕಾರ್ಯಪಾಲನ ವಿಭಾಗ ಕಚೇರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಎ.ಮೊಟ್ಲಾ ನಾಯಕ್ ಇವರು ಉದ್ಘಾಟಿಸಲಿದ್ದಾರೆ.

ಸಾಯಂಕಾಲ 5:30 ಗಂಟೆಗೆ ಮಹಾಮಹಿಮ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ಜರುಗಲಿದೆ. ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಚಾಲನೆ ನೀಡಲಿದ್ದಾರೆ.

ಮಹಾರಥೋತ್ಸವ ನಂತರ ಶ್ರೀಮಠದ ಕೈಲಾಸ ಮಂಟಪದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ಕಾರ್ಯಕ್ರಮದಲ್ಲಿ ಸಾನಿಧ್ಯವನ್ನು ಹುಬ್ಬಳ್ಳಿಯ ಶ್ರೀ ಜಗದ್ಗುರು ಮೂರುಸಾವಿರ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಡಾ,. ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಶ್ರೀ ಕ್ಷೇತ್ರ ಕಾಗಿನೆಲೆಯ ಮಹಾಸಂಸ್ಥಾನ ಕನಕ ಗುರುಪೀಠದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.

ಕಾಖಂಡಕಿ ಗುರುದೇವಾಶ್ರಮದ ಪರಮಪೂಜ್ಯ ಶ್ರೀಯೋಗಿಶ್ವರ ಮಹಾಸ್ವಾಮಿಗಳು ಉಪದೇಶಾಮೃತವನ್ನು ನೀಡಲಿದ್ದಾರೆ.

ಶಿವಮೊಗ್ಗದ ಹಿಂದುಸ್ತಾನಿ ಗಾಯಕರಾದ ವಿದ್ವಾನ್ ನೌಶಾದ್ ಹಾಗೂ ವಿದ್ವಾನ್ ನಿಶಾದ್ ಹರ್ಲಾಪುರ್ ಇವರಿಂದ ಸ್ವರಸಂಧ್ಯಾ ಜುಗಲ್ಬಂದಿ ಸಂಗೀತ ಕಾರ್ಯಕ್ರಮ ಹಾಗೂ ಗಂಗಾವತಿಯ ನರಸಿಂಹ ಜೋಶಿ ಇವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಳ್ಳುವ ಇತರ ಪರಮಪೂಜ್ಯರು: ಜಾತ್ರಾ ಮಹೋತ್ಸವದಲ್ಲಿ ಹಿರೇಸಿಂದೋಗಿ ಕಪ್ಪತ್ತೇಶ್ವರಮಠದ ಶ್ರೀಮನಿಪ್ರ ಚಿದಾನಂದ ಮಹಾಸ್ವಾಮಿಗಳು, ಮೈನಳ್ಳಿ-ಬಿಕನಹಳ್ಳಿ ಹಿರೇಮಠದ ಶ್ರೀ ಷ.ಬ್ರ.ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ನಿಡಗುಂದಿಕೊಪ್ಪ ಶಾಖಾಶಿವಯೋಗ ಮಂದಿರದ ಶ್ರೀಮನಿಪ್ರ ಶಿವಬಸವಮಹಾಸ್ವಾಮಿಗಳು, ಬಿಜಕಲ್ ಶ್ರೀಮನಿಪ್ರ ಶಿವಲಿಂಗ ಮಹಾಸ್ವಾಮಿಗಳು, ಭಾಗ್ಯನಗರದ ಶ್ರೀ ಶಂಕರಮಠದ ಶ್ರೀ ಸದ್ಗುರು ಶಿವರಾಮ ಕೃಷ್ಣನಂದ ಸ್ವಾಮಿಗಳು, ಹೂವಿನಹಡಗಲಿ ಶಾಖಾ ಗವಿಮಠದ ಪೂಜ್ಯರಾದ ಶ್ರೀಮನಿಪ್ರ ಡಾ.ಹಿರಿಶಾಂತವೀರ ಮಹಾಸ್ವಾಮಿಗಳು, ಸಂತೆಕಲ್ಲೂರು ಮಹಾಂತೇಶ್ವರಮಠದ ಶ್ರೀ ಷಬ್ರ ಮಹಾಂತಲಿಂಗ ಶಿವಾಚಾರ್ಯಮಹಾಸ್ವಾಮಿಗಳು, ಅಮಲಝರಿ-ಮೆಳ್ಳಿಗೇರಿಯ ಪರಮಪೂಜ್ಯ ಶ್ರೀ ಜ್ಞಾನಮಯಾನಂದ ಮಹಾಸ್ವಾಮಿಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅನ್ವೇಷಣೆ (ಜಿಜ್ಞಾಸುಗಳ ಪಯಣ) ಎಂಬ ಆಧ್ಯಾತ್ಮಿಕ ಕಾರ್ಯಕ್ರಮ: ಈ ಕಾರ್ಯಕ್ರಮದ ಜೊತೆಗೆ ಮೂರುದಿನಗಳ ಕಾಲ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.30 ರವರೆಗೆ ಶ್ರೀ ಗವಿಮಠದ ಯಾತ್ರಿ ನಿವಾಸದ ಆವರಣದಲ್ಲಿರುವ ಶಾಂತವನದಲ್ಲಿ ಕಜ್ಜಿಡೋಣಿಯ ಪರಮ ಪೂಜ್ಯ ಶ್ರೀ ಕೃμÁ್ಣನಂದ ಶಾಸ್ತ್ರಿಗಳು ಹಾಗೂ ಬೆನಕನಹಳ್ಳಿ ಪರಮಪೂಜ್ಯ ಶ್ರೀ ದೇವಾನಂದ ಶರಣರು ಇವರುಗಳಿಂದ ಅನ್ವೇಷಣೆ (ಜಿಜ್ಞಾಸುಗಳ ಪಯಣ) ಎಂಬ ಆಧ್ಯಾತ್ಮಿಕ ಕಾರ್ಯಕ್ರಮ ಜರುಗಲಿದೆ. ಮಾಹಿತಿಗಾಗಿ ಡಾ.ಪ್ರಶಾಂತ ಕೊಂಕಲ್ ಮೊ :8073285281 ಸಂಪರ್ಕಿಸಬಹುದಾಗಿದೆ.

ಶ್ರೀ ಗವಿಸಿದ್ದೇಶ್ವರ ಮಹಾತ್ಮೆ ನಾಟಕ ಪ್ರದರ್ಶನ: ಹಿರೇಬಗನಾಳ ಗ್ರಾಮದ ಶ್ರೀ ಗವಿಸಿದ್ದೇಶ್ವರ ಸೇವಾ ನಾಟ್ಯ ಸಂಘ ಇವರಿಂದ ರಾತ್ರಿ 10;30ಕ್ಕೆ ಮಠದ ಆವರಣದಲ್ಲಿರುವ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ಹತ್ತಿರವಿರುವ ಪಾದಗಟ್ಟಿಯ ಹತ್ತಿರ ಶ್ರೀ ಗವಿಸಿದ್ದೇಶ್ವರ ಮಹಾತ್ಮೆ ನಾಟಕ ಪ್ರದರ್ಶನಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಮೊ:9448570340 ಸಂಪರ್ಕಿಸಬಹುದಾಗಿದೆ.

ಬೃಹತ್ ರಕ್ತದಾನ ಶಿಬಿರ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕ, ಕೊಪ್ಪಳ. ಹಾಗೂ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಇವರಿಂದ ದಿನಾಂಕ 05/01/2026 ರಿಂದ 08/01/2026 ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಬೆಳೆಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಫಲ ಪುಷ್ಪ ಪ್ರದರ್ಶನ ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ದಿನಾಂಕ: 05-01-2026 ರಿಂದ 14-01-2026 ರ ವರಗೆ 10 ದಿನಗಳ ಕಾಲ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಮಟ್ಟದ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗವಿಮಠದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande