
ಬೆಂಗಳೂರು, 04 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾದ 23ನೇ ಚಿತ್ರಸಂತೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಲಾವಿದರ ಅಪೂರ್ವ ಕೈಚಳಕ ಮತ್ತು ಸೃಜನಶೀಲತೆಯನ್ನು ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಸಿ. ವೇಣುಗೋಪಾಲ ಅವರು ಸಚಿವರೊಂದಿಗೆ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa