
ಧಾರವಾಡ, 04 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಜನೆವರಿ 5 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜನೆವರಿ 5 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವ ಅವರು, ಧಾರವಾಡ ಸೃಜನಾ ರಂಗಮಂದಿರದಲ್ಲಿ ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಆಯೋಜಿಸಿರುವ ಗ್ಯಾರಂಟಿ ಉತ್ಸವ, ಕಾರ್ಯಾಗಾರದಲ್ಲಿ ಭಾಗವಹಿಸುವರು.
ಕಾರ್ಯಕ್ರಮದ ನಂತರ ಸಂಜೆ ಬೆಂಗಳೂರಿಗೆ ಪ್ರಯಾಣ ಬೆಳಸುವರೆಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa