
ಗದಗ, 06 ಜನವರಿ (ಹಿ.ಸ.) :
ಆ್ಯಂಕರ್ : ಇಂದಿನ ರಾಜಕೀಯದ ಏಳು ಬೀಳಿನ ಮೇಲಾಟದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಏಳೂವರಿ ವರ್ಷಗಳಷ್ಟು ದೀರ್ಘಾವಧಿಗೆ ಕೇವಲ ಇಬ್ಬರು ಪೂರ್ಣಾವಧಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಅವಕಾಶ ನೀಡಿದೆ.
ಅವರಲ್ಲಿ ಒಬ್ಬರು ಹಿಂದುಳಿದ ಸಮುದಾಯದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯ ಡಿ.ದೇವರಾಜ ಅರಸು ಅವರಾದರೆ, ಇನ್ನೊಬ್ಬರು ಪ್ರಸ್ತುತ ಮುಖ್ಯಮಂತ್ರಿಗಳಾಗಿ 2792 ದಿನಗಳನ್ನು ದಾಟಿ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ದಾಖಲಾರ್ಹ ಆಡಳಿತ ನೀಡುತ್ತಿರುವ ಸಿದ್ಧರಾಮಯ್ಯನವರಾಗಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ ಕೆ.ಬಿ.ಕಂಬಳಿ ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / lalita MP