

ಕೊಪ್ಪಳ, 07 ಜನವರಿ (ಹಿ.ಸ.) :
ಆ್ಯಂಕರ್ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಮೂರನೇ ದಿನದಂದು ವಿಶೇಷ ಖಾದ್ಯವಾದ ಹಪ್ಪಳ ವಿತರಿಸಲಾಯಿತು.
ಕಳೆದ 8 ವರ್ಷಗಳಿಂದ ಜಾತ್ರಾ ವಿವಿಧ ಮಿರ್ಚಿ,ಜಿಲೇಬಿ ತಯಾರಿಕೆಯ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಸಿರಿಗೇರೆಯ ಗವಿಶ್ರೀ ಸ್ನೇಹ ಗೆಳೆಯರ ಬಳಗ ಹಾಗೂ ಉದಯ ಗ್ರೂಪ್ ಗೆಳೆಯರ ಬಳಗ ಹಾಗೂ ಸಿದ್ರಾಂಪುರ, ಹಾವಿನಾಳ,ಸಿರಿಗೇರಿ,ದಾಸಾಪುರ, ಕೊಂಚಗೇರಿ,ಮುದ್ದಟ್ನೂರು, ಗುಂಡಿಗನೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಈ ವರ್ಷ ಹಪ್ಪಳ ವಿತರಣಾ ಸೇವೆ ಕೈಗೊಂಡಿದೆ.
ಹಪ್ಪಳ ತಯಾರಿಕೆಗೆ 14 ಡಬ್ಬಿ ಎಣ್ಣೆ,ಹಪ್ಪಳ ತಯಾರಿಕೆಗೆ 50 ಜನ ಬಾಣಸಿಗರು ಹಾಗೂ ಅವರಿಗೆ 20 ಜನ ಸಹಾಯ ಮಾಡುವುದರ ಮೂಲಕ ಹಪ್ಪಳ ತಯಾರಿಕೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಒಟ್ಟು 5 ಲಕ್ಷ ಹಪ್ಪಳಗಳನ್ನು ತಯಾರಿಸುವುದರ ಮೂಲಕ ಜಾತ್ರಗೆ ಬಂದ ಭಕ್ತಾಧಿಗಳಿಗೆ ವಿತರಿಸುವ ಸೇವೆಗೈದರು ಎಂದು ಶ್ರೀ ಗವಿಮಠ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್