
ಬೆಂಗಳೂರು, 09 ಜನವರಿ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಸಾರ್ವಜನಿಕ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಮಾತುಕತೆ ನಡೆಯಿತು.
ಈ ಭೇಟಿಯ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಸಿ. ವೇಣುಗೋಪಾಲ ಅವರು ಉಪಸ್ಥಿತರಿದ್ದರು.
ಸಭೆಯು ಸೌಹಾರ್ದ ವಾತಾವರಣದಲ್ಲಿ ನಡೆದಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಹಾಗೂ ಇತ್ತೀಚಿನ ರಾಜಕೀಯ ವಿದ್ಯಮಾನಗಳ ಕುರಿತು ಅಭಿಪ್ರಾಯ ವಿನಿಮಯವಾಗಿದೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa