
ನವದೆಹಲಿ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಅವರು, “ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಬೆಂಕಿ ದುರಂತ ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ” ಎಂದು ಪ್ರಾರ್ಥಿಸಿದ್ದಾರೆ.
ಭಿವಾಡಿಯ ಖುಷ್ಖೇಡ ಕರೌಲಿ ಕೈಗಾರಿಕಾ ಪ್ರದೇಶದ ಪ್ಲಾಟ್ ಸಂಖ್ಯೆ G1/118Bರಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ರಾಸಾಯನಿಕ ಘಟಕದಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಸ್ಫೋಟಗಳ ನಡುವೆ ಜ್ವಾಲೆಗಳು ವ್ಯಾಪಿಸಿವೆ. ಈ ದುರ್ಘಟನೆಯಲ್ಲಿ ಇದುವರೆಗೆ ಏಳು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa