ಪಂಚ ಗ್ಯಾರಂಟಿ ಸಮಾವೇಶದಲ್ಲಿ ಜನಾಕರ್ಷಿಸಿದ ಮಳಿಗೆಗಳು
ಗದಗ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಳಿಗೆಗಳೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ಜನಪರ ಕಾರ್ಯಕ್ರಮಗಳ ವಿವಿಧ ಇಲಾಖೆಯ ಮಳಿಗೆಗಳನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾ
ಫೋಟೋ


ಗದಗ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಳಿಗೆಗಳೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ಜನಪರ ಕಾರ್ಯಕ್ರಮಗಳ ವಿವಿಧ ಇಲಾಖೆಯ ಮಳಿಗೆಗಳನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೇರಿದಂತೆ ಗಣ್ಯರು, ಮುಖಂಡರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande