ಶೀಘ್ರ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ : ಸತೀಶ್ ಜಾರಕಿಹೊಳಿ
ಶಿವಮೊಗ್ಗ, 25 ಫೆಬ್ರವರಿ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ಕೆ.ಆರ್.ಡಿ.ಸಿ.ಎಲ್ ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಾಸಾoತ್ಯದೊಳಗೆ ಜನಸಂ
ಶೀಘ್ರ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ : ಸತೀಶ್ ಜಾರಕಿಹೊಳಿ


ಶಿವಮೊಗ್ಗ, 25 ಫೆಬ್ರವರಿ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ಕೆ.ಆರ್.ಡಿ.ಸಿ.ಎಲ್

ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಾಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು.

ನಂತರ ಮಾತನಾಡಿದ ಅವರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಅಗತ್ಯವಿರುವ 56.14 ಕೋಟಿ ರೂ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದ ಅವರು ಮೇ ಮಾಹೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಲಾಗುವುದು ಎಂದರು.

ಈ ಸೇತುವೆಯ ನಿರ್ಮಾಣದಿಂದಾಗಿ ಶರಾವತಿ ಸಂತ್ರಸ್ತ ಗ್ರಾಮಗಳಿರುವ ಆರು ಪಂಚಾಯಿತಿಗಳ ನಿವಾಸಿಗಳಿಗೆ ಹಾಗೂ ಸಾಗರ ಪಟ್ಟಣದಿಂದ ಕೊಲ್ಲೂರಿಗೆ 32ಕೀ. ಮೀ. ಅಂತರ ಕಡಿತಗೊಳ್ಳಲಿದೆ ಎಂದರು.

ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ದೈತ್ಯ ಕಾಂಕ್ರೀಟ್ ಬ್ಲಾಕ್ ಗಳಲ್ಲಿ ಗುಣಮಟ್ಟದ ಕೊರತೆ ಹಾಗೂ ಬ್ಲಾಕ್ ನ ಕ್ಷಮತೆಯಲ್ಲಿ ನ್ಯೂನತೆಗಳಿದ್ದಿದ್ದರಿಂದಾಗಿ ಬದಲಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ವಾಗಿದೆ. ಅದಾಗಿಯೂ ಇನ್ನೂ ವಿಳಂಬಕ್ಕೆ ಅವಕಾಶ ವಿಲ್ಲದಂತೆ ಸೇತುವೆ ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಸಾಗರ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿ ಕೈಗೆಟ್ಟಿಕೊಂಡಿದ್ದು, ಈಗಾಗಲೇ ಎರಡು ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಭೂ ಪರಿಹಾರ ಮೊತ್ತ ಉಳಿಕೆ 11ಕೋಟಿ ರೂ. ಗಳನ್ನು ಈ ಕೂಡಲೇ ಮಂಜೂರು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಅಪೇಕ್ಷೆಯಂತೆ ಮಾನ್ಯ ಲೋಕೋಪಯೋಗಿ ಸಚಿವರು ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ ಹೆಚ್ಚಿಸಿದ್ದು, ಶೀಘ್ರದಲ್ಲಿ ಲೋಕಾರ್ಪಣೆ ಮಾಡುವ ಭರವಸೆ ನೀಡಿರುವುದು ಸಂತಸ ತಂದಿದೆ ಎಂದ ಅವರು, ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂಬಂದಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಕರೆಸಿ, ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದರು.

ಈ ಸೇತುವೆ ನಿರ್ಮಾಣ ಕಾರ್ಯದಲ್ಲಿ ಹಸಿರುಮಕ್ಕಿ ಭಾಗದ ನಿವಾಸಿಗಳು ಅತಿ ಹೆಚ್ಚು ಕಾತರರಾಗಿದ್ದಾರೆ ಎಂದರು.ಸದರಿ ಸೇತುವೆ ನಿರ್ಮಿಸುವುದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಏರ್ಪಡ ಲಿದೆ. ಸಾಗರದಿಂದ ಕೊಲ್ಲೂರು, ಉಡುಪಿ, ಮುಂತಾದ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು ಮತ್ತು ಕುಂದಾಪುರ ಪಟ್ಟಣಗಳಿಗೆ ಸಮೀಪವಾಗಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande