
ಸಂಡೂರು, 12 ಮಾರ್ಚ್ (ಹಿ.ಸ.)
ಆ್ಯಂಕರ್: ದೋಣಿಮಲೈ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಂಡೂರು ಪಟ್ಟಣದ ಸೀನ್ ಬಸಪ್ಪ ಕ್ಯಾಂಪ್, ನಂದಿಹಳ್ಳಿ, ಕಮತೂರು, ನಾರಾಯಣಪುರ, ರಣಜಿತ್ಪುರ, ಭುಜಂಗನಗರ, ದೇವಗಿರಿ ಮತ್ತು ನರಸಿಂಗಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಎನ್ಜೆವೈ ಮತ್ತು ಐ.ಪಿ.ಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್