ಮಹಿಳೆ ಸರ್ವಶಕ್ತಳಾಗಿದ್ದು, ತನ್ನ ಶಕ್ತಿಯನ್ನು ಅರಿತು ಸ್ವಾವಲಂಬಿಯಾಗಬೇಕು: ನ್ಯಾ.ಮಹಾಂತೇಶ ದರಗದ
ಕೊಪ್ಪಳ, 17 ಮಾರ್ಚ್ (ಹಿ.ಸ.) ಆ್ಯಂಕರ್: ಆಧುನಿಕ ಮಹಿಳೆಯು ಸರ್ವಶಕ್ತಳಾಗಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ಮಹಿಳೆಯರು ಧೈರ್ಯವಾಗಿ ಮುನ್ನುಗ್ಗಬೇಕು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹ
ಮಹಿಳೆ ಸರ್ವಶಕ್ತಳಾಗಿದ್ದು, ತನ್ನ ಶಕ್ತಿಯನ್ನು ಅರಿತು ಸ್ವಾವಲಂಬಿಯಾಗಬೇಕು: ನ್ಯಾ.ಮಹಾಂತೇಶ ದರಗದ


ಮಹಿಳೆ ಸರ್ವಶಕ್ತಳಾಗಿದ್ದು, ತನ್ನ ಶಕ್ತಿಯನ್ನು ಅರಿತು ಸ್ವಾವಲಂಬಿಯಾಗಬೇಕು: ನ್ಯಾ.ಮಹಾಂತೇಶ ದರಗದ


ಮಹಿಳೆ ಸರ್ವಶಕ್ತಳಾಗಿದ್ದು, ತನ್ನ ಶಕ್ತಿಯನ್ನು ಅರಿತು ಸ್ವಾವಲಂಬಿಯಾಗಬೇಕು: ನ್ಯಾ.ಮಹಾಂತೇಶ ದರಗದ


ಕೊಪ್ಪಳ, 17 ಮಾರ್ಚ್ (ಹಿ.ಸ.)

ಆ್ಯಂಕರ್: ಆಧುನಿಕ ಮಹಿಳೆಯು ಸರ್ವಶಕ್ತಳಾಗಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ಮಹಿಳೆಯರು ಧೈರ್ಯವಾಗಿ ಮುನ್ನುಗ್ಗಬೇಕು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಹೇಳಿದರು.

ಮಂಗಳವಾರ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಜೀಂ ಪ್ರೇಮ್ಜೀ ಫೌಂಡೇಶನ್, ಇನ್ನರ್ವ್ಹೀಲ್ ಕ್ಲಬ್, ಶ್ರೀ ಮಹಿಳಾ ಪ್ರತಿಧ್ವನಿ ಸಾಮಾಜಿಕ, ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳ(ರಿ) ಹಾಗೂ ವಾಸವಿ ಕ್ಲಬ್ ಭಾಗ್ಯನಗರ ಪಾನಘಂಟಿ ಫೌಂಡೇಶನ್(ರಿ) ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆ ಎಲ್ಲ ರಂಗದಲ್ಲಿಯೂ ತನ್ನ ಛಾಪು ಮೂಡಿಸುತ್ತಿದ್ದಾಳೆ. ಅವಳಿಗೆ ಅರ್ಹತೆ ಇದೆ, ಅಗಾಧ ಅವಕಾಶಗಳೂ ಇವೆ, ಮಹಿಳೆ ಧೈರ್ಯವಾಗಿ ಮುನ್ನುಗ್ಗಬೇಕು. ಸಮಾಜದಲ್ಲಿ ಸಮಾನತೆ ಸಾಧಿಸಲು, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸುಶಿಕ್ಷಿತ ಸಮಾಜದಲ್ಲಿಯೇ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಸುರಕ್ಷಿತವಾಗಿರುವ ಕುರಿತು ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದಷ್ಟೇ ಅಲ್ಲ, ಹೆಣ್ಣುಮ್ಕಕಳನ್ನು ಹೇಗೆ ಗೌರವಿಸಬೇಕು ಎಂಬುದನ್ನು ಗಂಡುಮಕ್ಕಳಿಗೂ ಕಲಿಸಬೇಕು. ಮಹಿಳೆಯರ ರಕ್ಷಣೆಗೆ ಕಾನೂನಿನಲ್ಲಿ ಹಲವಾರು ರೀತಿಯ ಅವಕಾಶಗಳಿದ್ದು, ಸಂವಿಧಾನದಲ್ಲಿಯೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಮಹಿಳೆಯರು ಇವುಗಳನ್ನು ಅರಿತುಕೊಂಡು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಜಿ. ಗೊಂಡಬಾಳ ಅವರು ಮಾತನಾಡಿ, ಮಹಿಳೆಗೆ ಮಹಿಳೆಯೇ ಶತ್ರುವಾಗಿರುವ ಕಾಲ ಘಟ್ಟದಲ್ಲಿ, ಮಹಿಳೆ ಓದು ಬರಹದ ಕಡೆಗೆ, ಸ್ವಂತದ ಬೆಳವಣಿಗೆಯ ಕಡೆಗೆ ಗಮನ ಹರಿಸಬೇಕು. ಸಮಾಧಾನ ಮತ್ತು ಶಾಂತಚಿತ್ತತೆಯಿಂದ ಎಲ್ಲವನ್ನೂ ಅವಲೋಕಿಸಿ ಮುನ್ನಡೆಯಬೇಕು, ವಿಧವೆ ಮಹಿಳೆ ಬಗ್ಗೆ ಸಮಾಜ ಆಡುವ ಮಾತುಗಳು ಮತ್ತು ವಿಧುರ ಪುರುಷನ ಬಗ್ಗೆ ಸಮಾಜ ತೋರುವ ಅನುಕಂಪವನ್ನೇ ನಾವು ನೋಡಿದರೆ ಅಸಮಾನತೆಯನ್ನು ಗಮನಿಸಬಹುದು. ಕೇವಲ ಹೆಣ್ಣುಮಕ್ಕಳಿಗೆ ಅಷ್ಟೇ ಅಲ್ಲದೇ ಗಂಡುಮಕ್ಕಳಿಗೆ ಸರಿಯಾದ ಸಂಸ್ಕಾರ ಕಲಿಸುವ ಅಗತ್ಯವಿದೆ. ಮಹಿಳೆಯ ತಮ್ಮ ಅಹಮಿಕೆಯನ್ನು ಬಿಟ್ಟು ಸಮಾಜ ಕಟ್ಟುವ ಕಡೆಗೆ ಗಮನಹರಿಸಿದರೆ ಅಸಾಧಾರಣ ಪ್ರಗತಿ ಹೊಂದಬಹುದು ಎಂದರು. ಮಹಿಳಾ ದೌರ್ಜನ್ಯ ತಮ್ಮ ನಂಬುಗಸ್ಥರಿಂದಲೇ ಹೆಚ್ಚಾಗಿ ನಡೆಯುತ್ತಿರುವದರಿಂದ ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ ಮಾತನಾಡಿ, ಇಲಾಖೆ ಅನೇಕ ಯೋಜನೆಗಳ ಮೂಲಕ ಮಹಿಳೆ ಮತ್ತು ಮಕ್ಕಳ ಸಬಲೀಕರಣ ಮಾಡುತ್ತಿದೆ. ಈ ಬಾರಿಯ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಗೀವ್ ಟು ಗೇನ್ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮಹಿಳೆಯರ ಶಕ್ತಿಯ ಬಗ್ಗೆ ಹೇಳಲು ಪದಗಳು ಸಾಲುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ಜಯಶ್ರೀ ಆರ್., ವಿರುಪಾಕ್ಷಿ, ಯಲ್ಲಮ್ಮ ಅಂಡಗಿ, ಬೆಟದೇಶ ಮಾಳೆಕೊಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಎಲಿಗಾರ, ವಿವಿಧ ಮಹಿಳಾ ಸಂಘಟನೆಗಳ ಡಾ. ರಾಧಾ ಕುಲಕರ್ಣಿ, ಗೀತಾ ಮುತ್ತಾಳ, ಮಧು ಶೆಟ್ಟರ್, ಸರೋಜಾ ಬಾಕಳೆ, ಕೋಮಲಾ ಕುದರಿಮೋತಿ ಸೇರಿದಂತೆ ಇತರರು ಇದ್ದರು. ಸುಜಾತಾ ರಾಯಕರ್ ಮತ್ತು ಪ್ರೀತಿ ಕೋರೆ ಕಾರ್ಯಕ್ರಮ ನಿರ್ವಹಿಸಿದರು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪ್ರದಾನ : ಜಿಲ್ಲೆಯ ಆರು ಜನ ಮಕ್ಕಳಿಗೆ ಸಾಂಸ್ಕೃತಿಕ, ಕ್ರೀಡೆ, ಸಾಹಿತ್ಯ ಸೇವೆಯನ್ನು ಗುರುತಿಸಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ನೆಟ್ಬಾಲ್ ಮತ್ತು ಪೆಂಕಾಕ್ ಸಿಲತ್ ನಲ್ಲಿ ರಾಷ್ಟ್ರೀಯ ಪದಕ ಪಡೆದ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅಸಾಧಾರಣ ಸಾಧನೆ ಮಾಡಿರುವ ಸಾಹಿತ್ಯ ಎಂ. ಗೊಂಡಬಾಳ, ಕಲಾ ಸೇವೆಗೆ ಸಾಯಿ ಶೌರ್ಯ ಎಂ. ಕುಕನೂರ, ಕ್ರೀಡಾ ಕ್ಷೇತ್ರದ ಸಾಧನೆಗೆ ಅಖಿಲೇಶ ಯಾದವ್ ಕೊಪ್ಪಳ, ಆಫ್ರೀನ್ ಪೀರಸಾಬ್ ಗಂಗಾವತಿ, ಮೊಹಮ್ಮದ್ ಅಸದ್ ಗಂಗಾವತಿ ಹಾಗೂ ಪ್ರದ್ವಿಕಾ ಅಗಸಿಮುಂದಿನ ಕುಷ್ಟಗಿ ಅವರಿಗೆ ಹತ್ತು ಸಾವಿರ ನಗದು ಪುರಸ್ಕಾರದ ಜೊತೆಗೆ ಪ್ರಶಸ್ತಿ ನೀಡಲಾಯಿತು. ಅಲ್ಲದೇ ಇದೇ ವೇಳೆ ಉತ್ತಮ ಸೇವೆ ಮಾಡಿದ ಮೇಲ್ವಿಚಾರಿಕಿಯರಿಗೆ, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande