
ಹಾವೇರಿ, 19 ಮಾರ್ಚ್ (ಹಿ.ಸ.):
ಆ್ಯಂಕರ್:
ಸಾರ್ವಜನಿಕರ ಸಮಸ್ಯೆಗಳು ಹಾಗೂ ಮನವಿಗಳನ್ನು ಸ್ವೀಕರಿಸಲು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರು ನಾಳೆ (ಮಾರ್ಚ್ 20) ಜನಸಂಪರ್ಕ ಕಚೇರಿಯಲ್ಲಿ ಲಭ್ಯರಾಗಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾನಗಲ್ ಜನಸಂಪರ್ಕ ಕಚೇರಿಯಲ್ಲಿ ಶಾಸಕರು ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರದ ನಾಗರಿಕರು ತಮ್ಮ ಸಮಸ್ಯೆಗಳು, ಮನವಿಗಳು ಹಾಗೂ ವಿವಿಧ ಅಭಿವೃದ್ಧಿ ಸಂಬಂಧಿತ ವಿಚಾರಗಳನ್ನು ನೇರವಾಗಿ ಶಾಸಕರ ಗಮನಕ್ಕೆ ತರಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa