
ವಿಜಯಪುರ, 22 ಮಾರ್ಚ್ (ಹಿ.ಸ.)
ಆ್ಯಂಕರ್ ; ವಿಜಯಪುರ ನಗರದ ಭಾವಸಾರ ನಗರದಲ್ಲಿರುವ ಮಾನಸ ರೆಸಿಡೆನ್ಸಿ ಹತ್ತಿರ ನೂತನವಾಗಿ ಆರಂಭಿಸಿರುವ ಶ್ರೀ ಸಿದ್ಧೇಶ್ವರ ಲೋಕಕಲ್ಯಾಣ ಟ್ರಸ್ಟ್ ವತಿಯಿಂದ ಸ್ಥಾಪಿತವಾದ ಶ್ರೀ ಸಿದ್ಧೇಶ್ವರ ಮೆಡಿಕಲ್ ಶಾಖೆಯ ಉದ್ಘಾಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ, ಟ್ರಸ್ಟ್ನ ಸಮಾಜಮುಖಿ ಸೇವೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಟ್ರಸ್ಟ್ ವತಿಯಿಂದ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರಕುವಂತೆ ಮಾಡುವ ಉದ್ದೇಶದಿಂದ ಈ ಮೆಡಿಕಲ್ ಶಾಖೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ಹಲವಾರು ಗಣ್ಯರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande