
ದಾಂಡೇಲಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ಅರಣ್ಯ ಇಲಾಖೆ ಕೆನರಾ ವೃತ್ತ ಶಿರಸಿ ಹಾಗೂ ದಾಂಡೇಲಿ ಅಣಶಿ ಹುಲಿ ಸಂರಕ್ಷಣಾ ಪ್ರತಿಷ್ಠಾನ (ಕಾಳಿ ಹುಲಿ ಸುರಕ್ಷಿತ ಪ್ರದೇಶ) ವನ್ಯಜೀವಿ ಉಪ ವಿಭಾಗ ಅಣಶಿ ವತಿಯಿಂದ ಜೋಯಿಡಾ ತಾಲೂಕಿನ ಕುಂಬಾರವಾಡದ ವನ್ಯಜೀವಿ ವಲಯದಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ಶಾಸಕ ಆರ್.ವಿ. ದೇಶಪಾಂಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು. ವನ್ಯಜೀವಿ ಸಂರಕ್ಷಣೆ ಹಾಗೂ ಅರಣ್ಯ ಪ್ರದೇಶದ ಜನರ ಜೀವನೋಪಾಯ ಅಭಿವೃದ್ಧಿಗೆ ಈ ಯೋಜನೆಗಳು ಸಹಕಾರಿಯಾಗಲಿವೆ ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಬಿಸಿಸಿ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa