
ಬೆಂಗಳೂರು, 25 ಮಾರ್ಚ್ (ಹಿ.ಸ.):
ಆ್ಯಂಕರ್:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿಯವರು, ವೀರಶೈವ ಅಭಿವೃದ್ಧಿ ನಿಮಗದ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರರವರು, ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ಎಸ್.ಆತ್ಮನಂದರವರು, ವಿಧಾನಸಭೆ ಮುಖ್ಯಸಚೇತಕರಾದ ಅಶೋಕ್ ಪಟ್ಟಣ, ಶಾಸಕರಾದ ಪೊನ್ನಣ್ಣ, ಬಸನಗೌಡ ದದ್ದಲ್, ಕೋನರೆಡ್ಡಿ, ಶ್ರೀನಿವಾಸ್, ನಜೀರ್ ಅಹ್ಮದ್, ಅಲ್ಲಮಪ್ರಭು ಪಾಟೀಲ್, ವಿವಿಧ ಅಭಿವೃದ್ಧಿ ನಿಗಮಗಳ ಅಧ್ಯಕ್ಷರಾದ ಕೀರ್ತಿ ಗಣೇಶ್, ನಂಜಪ್ಪ, ಜಿ.ಎಚ್. ಮರಿಯೋಜಿ ರಾವ್, ಭರಮಣ್ಣ ಉಪ್ಪಾರ್, ಸುಜ್ಞಾನಮೂರ್ತಿ, ಮುತ್ತುರಾಜ್, ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa