ಹೋಳಿ ಹಬ್ಬ ವೈವಿಧ್ಯತೆಯಲ್ಲಿ ಏಕತೆ ಸಾರುವ ಹಬ್ಬ: ಖರ್ಗೆ
ನವದೆಹಲಿ, 04 ಮಾರ್ಚ್ (ಹಿ.ಸ.): ಆ್ಯಂಕರ್:ಹೋಳಿ ಹಬ್ಬವು ನಮ್ಮ ಬಹುವರ್ಣದ ಹಾಗೂ ಬಹುಸಂಸ್ಕೃತಿಯ ಸಮಾಜದ ಆತ್ಮವನ್ನು ಪ್ರತಿಬಿಂಬಿಸುವ ಹಬ್ಬವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಹೋಳಿ ಹಬ್ಬದ ಅಂಗವಾಗಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ
Kharge


ನವದೆಹಲಿ, 04 ಮಾರ್ಚ್ (ಹಿ.ಸ.):

ಆ್ಯಂಕರ್:ಹೋಳಿ ಹಬ್ಬವು ನಮ್ಮ ಬಹುವರ್ಣದ ಹಾಗೂ ಬಹುಸಂಸ್ಕೃತಿಯ ಸಮಾಜದ ಆತ್ಮವನ್ನು ಪ್ರತಿಬಿಂಬಿಸುವ ಹಬ್ಬವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಹೋಳಿ ಹಬ್ಬದ ಅಂಗವಾಗಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಅವರು, ಈ ಹಬ್ಬವು ಶತಮಾನಗಳಿಂದ ನಮ್ಮ ನಾಗರಿಕತೆಯ ವಿಶಿಷ್ಟ ಲಕ್ಷಣವಾಗಿರುವ ವೈವಿಧ್ಯತೆಯಲ್ಲಿ ಏಕತೆ, ಪರಸ್ಪರ ಸಾಮರಸ್ಯ ಮತ್ತು ಸಹೋದರತ್ವದ ಸಂಪ್ರದಾಯಗಳನ್ನು ಆಚರಿಸುವುದಾಗಿದೆ ಎಂದು ಹೇಳಿದ್ದಾರೆ.

ಅಂತರಗಳನ್ನು ಅಳಿಸಿ, ಹೃದಯಗಳನ್ನು ಹತ್ತಿರ ಮಾಡುವ ಈ ಸಂತೋಷದಾಯಕ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಪ್ರೀತಿ ಮತ್ತು ಒಗ್ಗಟ್ಟಿನ ಸಂದೇಶವನ್ನು ಹರಡೋಣ ಎಂದು ಖರ್ಗೆ ಕರೆ ನೀಡಿದ್ದಾರೆ.

ನಿಮ್ಮ ಜೀವನವು ಸದಾ ಸಂತೋಷದ ಬಣ್ಣಗಳಿಂದ ಕಂಗೊಳಿಸಲಿ ಎಂದು ಅವರು ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande