
ವಿಜಯಪುರ, 05 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ವಿಭೂತಿಹಳ್ಳಿ ಹೊಸೂರು ವೃತ್ತದಲ್ಲಿ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಲಾಯಿತು.
ಸಿಂದಗಿ ಮತ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅಂದಾಜು 5 ಲಕ್ಷ ರೂಪಾಯಿ ಮೌಲ್ಯದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಿಂದಗಿ ತಾಲೂಕು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande