
ವಿಜಯಪುರ, 05 ಮಾರ್ಚ್ (ಹಿ.ಸ.)
ಆ್ಯಂಕರ್ : ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್ನಲ್ಲಿ ವಿವಿಧ ಬೇಡಿಕೆಯನ್ನು ಜಾರಿಗೆ ಮಾಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದವರು ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ನಲ್ಲಿ ಕನಿಷ್ಠ ವೇತನ ನೀಡಬೇಕು. ಪಿ.ಎಫ್ ರಜೆ ಘೋಷಣೆ ಮಾಡಬೇಕು. ಇನ್ನು ಭದ್ರತೆ ಇಲ್ಲದೇ ಕೆಲಸ ನಿರ್ವಹಣೆ ಮಾಡಲಾಗುತ್ತಿದೆ. ಇದರಿಂದ ಕಾರ್ಮಿಕರ ಬದುಕು ಅತಂತ್ರ ಆಗಿದೆ. ಅದಕ್ಕಾಗಿ ನಮ್ಮ ವಿವಿಧ ಬೇಡಿಕೆಗೆ ಸರ್ಕಾರ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande