
ಬಳ್ಳಾರಿ, 07 ಮಾರ್ಚ್ (ಹಿ.ಸ.):
ಆ್ಯಂಕರ್ : ಬಳ್ಳಾರಿ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಹಿರಿಯ ನ್ಯಾಯವಾದಿ ಶಿವಾ ಚಂದ್ರಶೇಖರ (87) ಅವರು ಶನಿವಾರ ನಸುಕಿನಲ್ಲಿ ಲಿಂಗೈಕ್ಯರಾಗಿದ್ದು, ವೀರಶೈವ ರುದ್ರಭೂಮಿಯಲ್ಲಿ ಇಂದು ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
ಮೃತರು ಇಬ್ವರು ಪುತ್ರರು, ಒಬ್ಬ ಪುತ್ರಿ, ಸೊಸೆಯಂದಿರರು , ಮೊಮ್ಮಕ್ಕಳು, ಅಪಾರ ಸಂಖ್ಯೆಯ ಬಂಧು ಮಿತ್ರರು ಹಾಗೂ ಆಪ್ತರನ್ನು ಅಗಲಿದ್ದಾರೆ.
ಮೃತರು ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ವಿವರಗಳಿಗಾಗಿ ಶಿವಾ ರಮೇಶ್, ಮೊಬೈಲ್ : 9880002586 ಮತ್ತು 9481436700 ಗೆ ಸಂಪರ್ಕ ಮಾಡಿರಿ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್