
ವಿಜಯಪುರ, 08 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಇಂದು ನಗರದಲ್ಲಿ ಅಪಘಾತ ತಡೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಬಿತ್ತಿ ಪತ್ರಗಳ ಮೂಲಕ ಜಾಗ್ರತಿ ಅಭಿಯಾನ ನಡೆಸಿದರು.
ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಣ್ಮಣ ನಿಂಬರಗಿ ಅವರು ಸೈಬರ್ ಅಪರಾಧದಲ್ಲಿ ಮೋಸ ಹೋಗುತ್ತಿರುವ ಸಾರ್ವಜನಿಕತಿಗೆ ಜಾಗೃತಿ ಅಭಿಯಾನದ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.
ಇನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಕಷ್ಟು ಅಪಘಾತ ಪ್ರಕರಣಗಳು ವರದಿ ಆಗುತ್ತಿದ್ದು, ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಾಹನ ಸವಾರರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕು ಎಂದು ಸಂದೇಶ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande