








ಬಳ್ಳಾರಿ, 09 ಮಾರ್ಚ್ (ಹಿ.ಸ.)
ಆ್ಯಂಕರ್:
ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರು ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪತ್ರ ಬರೆದು, `ಧೈರ್ಯದಿಂದ, ಶಾಂತ ಚಿತ್ತದಿಂದ ಪರೀಕ್ಷೆ ಬರೆಯಿರಿ, ಶುಭವಾಗಲಿ' ಎಂದು ಹಾರೈಸಿದ್ದಾರೆ.
ಬಳ್ಳಾರಿ ನಗರ ಕ್ಷೇತ್ರದ ವ್ಯಾಪ್ತಿಯ 45ಕ್ಕೂ ಹೆಚ್ಚು ಶಾಲೆಗಳ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪತ್ರ ಬರೆದಿದ್ದು, ಅವರ ಅನುಯಾಯಿಗಳು ಪ್ರತಿ ಶಾಲೆಗೆ ಭೇಟಿ ಮಾಡಿ, ವಿದ್ಯಾರ್ಥಿಗಳಿಗೆ ಹಂಚಿ, ಶುಭ ಹಾರೈಸುತ್ತಿದ್ದಾರೆ.
ಅಲ್ಲದೇ, ಪೋಷಕರಿಗೂ, ವಿದ್ಯಾರ್ಥಿಗಳ ಮೇಲೆ ಅನಗತ್ಯ ಒತ್ತಡ ಹೇರದೇ, ಮಕ್ಕಳನ್ನು ಪ್ರೋತ್ಸಾಹಿಸಿ, ವಿಶ್ವಾಸದಿಂದ ಕಾಣಿರಿ. ನಿಮ್ಮ ಬೆಂಬಲ ಈ ದಿನಗಳಲ್ಲಿ ಪರೀಕ್ಷಾರ್ಥಿಗಳಿಗೆ ಅಗತ್ಯ ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ವಾರ್ಷಿಕ 1ರ ಪರೀಕ್ಷೆಗಳು ರಾಜ್ಯಾದ್ಯಂತ ಏಪ್ರಿಲ್ 18 ರಿಂದ ಪ್ರಾರಂಭವಾಗಲಿವೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್