ಟೀಮ್ ಇಂಡಿಯಾದ ಗೆಲುವು ತಾಳ್ಮೆ ಮತ್ತು ಆತ್ಮವಿಶ್ವಾಸದ ಶಕ್ತಿಗೆ ಸಾಕ್ಷಿ: ಪ್ರಧಾನಿ ಮೋದಿ
ನವದೆಹಲಿ, 09 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ಟಿ20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಗೆಲುವನ್ನು ಶ್ಲಾಘಿಸಿ, ಈ ಸಾಧನೆಯನ್ನು ಜೀವನದ ದೊಡ್ಡ ಗುರಿಗಳನ್ನು ಸಾಧಿಸುವ ಜೀವಂತ ಉದಾಹರಣೆಯೆಂದು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎ
Pm


ನವದೆಹಲಿ, 09 ಮಾರ್ಚ್ (ಹಿ.ಸ.):

ಆ್ಯಂಕರ್:

ಪ್ರಧಾನಿ ನರೇಂದ್ರ ಮೋದಿ ಅವರು ಟಿ20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಗೆಲುವನ್ನು ಶ್ಲಾಘಿಸಿ, ಈ ಸಾಧನೆಯನ್ನು ಜೀವನದ ದೊಡ್ಡ ಗುರಿಗಳನ್ನು ಸಾಧಿಸುವ ಜೀವಂತ ಉದಾಹರಣೆಯೆಂದು ಕೊಂಡಾಡಿದ್ದಾರೆ.

ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಟೀಮ್ ಇಂಡಿಯಾದ ಸಾಧನೆ ಕೇವಲ ಕ್ರೀಡಾ ವಿಜಯವಲ್ಲ, ಬದಲಾಗಿ ದೃಢನಿಶ್ಚಯ, ಪರಿಶ್ರಮ ಮತ್ತು ಆತ್ಮವಿಶ್ವಾಸದ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಅವರು, “ಟಿ20 ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಮೂಲಕ ಭಾರತ ತಂಡವು ದೃಢನಿಶ್ಚಯ, ತಾಳ್ಮೆ ಮತ್ತು ಆತ್ಮವಿಶ್ವಾಸದ ಸಂಯೋಜನೆಯು ಜೀವನದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ಸರಿಯಾದ ದಿಕ್ಕಿನಲ್ಲಿ ಕಠಿಣ ಪರಿಶ್ರಮ ಮಾಡಿದರೆ ಪ್ರತಿಯೊಂದು ಗುರಿಯನ್ನೂ ಸಾಧಿಸಬಹುದು ಎಂಬುದನ್ನು ಈ ಗೆಲುವು ತೋರಿಸುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ “ಅಭಿಸಂ ಸ್ವಾತ್ಮನೋ ರಕ್ಷಾ ಅವಿರತಂ ಸುಸ್ಥಿರಂ ತಯಾ” ಎಂಬ ಸಂಸ್ಕೃತ ನಾಣ್ಣುಡಿಯನ್ನು ಹಂಚಿಕೊಂಡಿದ್ದು, ಜೀವನದಲ್ಲಿ ಪ್ರಗತಿ ಸಾಧಿಸಲು ಬಯಸುವ ಪ್ರತಿಯೊಬ್ಬರೂ ದೃಢನಿಶ್ಚಯ ಮತ್ತು ಶ್ರದ್ಧೆಯಿಂದ ಶ್ರಮಿಸಬೇಕು ಎಂದು ಅದರ ಅರ್ಥವನ್ನು ವಿವರಿಸಿದ್ದಾರೆ.

ತಾಳ್ಮೆಯೊಂದಿಗೆ ನಿರಂತರ ಕಠಿಣ ಪರಿಶ್ರಮ ಮಾಡಿದರೆ ಯಶಸ್ಸು ಖಂಡಿತವಾಗಿಯೂ ಸಿಗುತ್ತದೆ ಎಂಬ ಸಂದೇಶವನ್ನು ಟೀಮ್ ಇಂಡಿಯಾದ ಈ ವಿಜಯ ದೇಶದ ಯುವಕರಿಗೆ ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande