ರಸಗೊಬ್ಬರ ಖರೀದಿಗೆ ‘ಎಫ್.ಐ.ಡಿ' ಕಡ್ಡಾಯ
ಬಳ್ಳಾರಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ನೈಜ ರೈತರಿಗೆ ಮಾತ್ರ ಸಬ್ಸಿಡಿ ಸಹಿತ ಗೊಬ್ಬರ ತಲುಪಿಸಲು ಎಫ್ಐಡಿ (ಫಾರ್ಮರ್ ಐಡಿ) ಸಂಖ್ಯೆ ಕಡ್ಡಾಯಗೊಳಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್ ಅ
ರಸಗೊಬ್ಬರ ಖರೀದಿಗೆ ‘ಎಫ್.ಐ.ಡಿ' ಕಡ್ಡಾಯ


ಬಳ್ಳಾರಿ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ನೈಜ ರೈತರಿಗೆ ಮಾತ್ರ ಸಬ್ಸಿಡಿ ಸಹಿತ ಗೊಬ್ಬರ ತಲುಪಿಸಲು ಎಫ್ಐಡಿ (ಫಾರ್ಮರ್ ಐಡಿ) ಸಂಖ್ಯೆ ಕಡ್ಡಾಯಗೊಳಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಕೃಷಿ ಇಲಾಖೆ ಅಭಿವೃದ್ಧಿಪಡಿಸಿರುವ ‘ಕೆ-ಕಿಸಾನ್' ಹೊಸ ತಂತ್ರಾ0ಶದ ಮೂಲಕವೇ ಇನ್ನು ಮುಂದೆ ರಸಗೊಬ್ಬರ ವಿತರಣೆ ನಡೆಯಲಿದೆ. ರೈತರು ತಮ್ಮ ಎಫ್.ಐ.ಡಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಬಳಸಿ, ತಮ್ಮ ಜಮೀನಿನ ವಿಸ್ತೀರ್ಣ ಹಾಗೂ ಬೆಳೆದ ಬೆಳೆಗಳಿಗೆ ಅನುಗುಣವಾಗಿ ಎಕರೆಗೆ ಒಂದು ಚೀಲ ಯೂರಿಯಾ ಮಾತ್ರ ಖರೀದಿಸಲು ಅವಕಾಶವಿರುತ್ತದೆ. ಮಾರಾಟಗಾರರು ಸಹ ಇದೇ ಮಾದರಿಯಲ್ಲಿ ವಿತರಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಎಫ್.ಐ.ಡಿ ಹೊಂದಿಲ್ಲದ ರೈತರು ತಕ್ಷಣವೇ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಎಫ್.ಐ.ಡಿ ಸೃಜಿಸಿಕೊಳ್ಳಬೇಕು. ಈಗಾಗಲೇ ಎಫ್.ಐ.ಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್ಗಳು ಅದಕ್ಕೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.

*ಅಕ್ರಮ ಎಸಗಿದರೆ ಜೈಲು ಶಿಕ್ಷೆ ಎಚ್ಚರಿಕೆ:*

ರೈತರಲ್ಲದವರು ಇತರರ ಆಧಾರ್ ಅಥವಾ ಎಫ್.ಐ.ಡಿ ಬಳಸಿ ಗೊಬ್ಬರ ಸಂಗ್ರಹಿಸುವುದು, ಕೃತಕ ಅಭಾವ ಸೃಷ್ಟಿಸುವುದು ಅಥವಾ ಕೃಷಿಯೇತರ ಚಟುವಟಿಕೆಗಳಿಗೆ ಗೊಬ್ಬರ ಬಳಸುವುದು ಕಂಡುಬAದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬೆಳೆ ಇಲ್ಲದಿದ್ದರೂ ಅಸಹಜವಾಗಿ ಹೆಚ್ಚಿನ ಗೊಬ್ಬರ ಮಾರಾಟ ಮಾಡಿದ್ದ 102 ಮಾರಾಟಗಾರರಿಗೆ ಮಾರಾಟ ತಡೆ ನೋಟಿಸ್ ಹಾಗೂ 28 ಮಾರಾಟಗಾರರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಾರಾಟಗಾರರಿಗೆ ಕಟ್ಟುನಿಟ್ಟಿನ ಸೂಚನೆ :

ರಸಗೊಬ್ಬರವನ್ನು ಜಿಲ್ಲೆಯಿಂದ ಹೊರಗೆ ಅಥವಾ ಹೊರ ರಾಜ್ಯಗಳಿಗೆ ಸಾಗಿಸುವಂತಿಲ್ಲ. ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ. ಯೂರಿಯಾ ಜೊತೆಗೆ ರೈತರು ಇಚ್ಛಿಸದ ಇತರ ಕೃಷಿ ಪರಿಕರಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಡ ಹೇರುವಂತಿಲ್ಲ. ಕಡ್ಡಾಯವಾಗಿ ಪಿಓಎಸ್ ಯಂತ್ರದ ಮೂಲಕವೇ ವಿತರಣೆ ಮಾಡಬೇಕು.

ರೈತರಲ್ಲಿ ಮನವಿ :

ರೈತರು ಆತಂಕಕ್ಕೆ ಒಳಗಾಗಿ ಅನಗತ್ಯವಾಗಿ ಹೆಚ್ಚಿನ ಪ್ರಮಾಣದ ಗೊಬ್ಬರ ಸಂಗ್ರಹಿಸಿಟ್ಟುಕೊಳ್ಳಬಾರದು. ಅಂತಹ ದಾಸ್ತಾನುಗಳನ್ನು ‘ಅನುಮಾನಾಸ್ಪದ ದಾಸ್ತಾನು' ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು.

ಒಟ್ಟಾರೆ ಉಸ್ತುವಾರಿಗಾಗಿ ವಿವಿಧ ಹಂತಗಳಲ್ಲಿ ನೋಡಲ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಯಾವುದೇ ನ್ಯೂನತೆ ಕಂಡು ಬ,0ದಲ್ಲಿ ರಸಗೊಬ್ಬರ ನಿಯಂತ್ರಣ ಆದೇಶ 1985 ಮತ್ತು ಅಗತ್ಯ ವಸ್ತುಗಳ ಕಾಯಿದೆ 1955 ರಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande