ಜುಲೈ 11 ರಂದು ರಾಷ್ಟ್ರೀಯ ಲೋಕ ಆದಾಲತ್
ಧಾರವಾಡ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 11, 2026 ರಂದು ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು. ಲೋಕ ಅದಾಲತ್ದಲ್ಲಿ ನ್ಯಾಯಾಲಯದಲ್ಲಿ
ಜುಲೈ 11 ರಂದು ರಾಷ್ಟ್ರೀಯ ಲೋಕ ಆದಾಲತ್


ಧಾರವಾಡ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 11, 2026 ರಂದು ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು.

ಲೋಕ ಅದಾಲತ್ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಲೋಕ್ ಆದಾಲತ್ನಲ್ಲಿ ಪೂರ್ವವ್ಯಾಜ್ಯ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ರಾಜಿ ಆಗಬಹುದಾದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜಿ ಸಂದಾನ ಮಾಡಿಕೊಳ್ಳಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande