ಪರಶುರಾಮ್ ಜಯಂತಿ, ಅಕ್ಷಯ ತೃತೀಯಕ್ಕೆ ರಾಷ್ಟ್ರ ನಾಯಕರ ಶುಭಾಶಯ
ನವದೆಹಲಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಗವಾನ್ ಪರಶುರಾಮ್ ಜಯಂತಿ ಹಾಗೂ ಅಕ್ಷಯ ತೃತೀಯದ ಅಂಗವಾಗಿ ರಾಷ್ಟ್ರದ ಹಲವು ಪ್ರಮುಖ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಲೋಕಸಭಾಧ್ಯಕ್ಷ ಓಂ ಬಿರ್ಲಾ, ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಈ ಶುಭ ಸಂದರ್ಭದಲ್ಲಿ
ಪರಶುರಾಮ


ನವದೆಹಲಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಗವಾನ್ ಪರಶುರಾಮ್ ಜಯಂತಿ ಹಾಗೂ ಅಕ್ಷಯ ತೃತೀಯದ ಅಂಗವಾಗಿ ರಾಷ್ಟ್ರದ ಹಲವು ಪ್ರಮುಖ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಲೋಕಸಭಾಧ್ಯಕ್ಷ ಓಂ ಬಿರ್ಲಾ, ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಈ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಸಂದೇಶ ತಿಳಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಶುಭಾಶಯ ಸಂದೇಶದಲ್ಲಿ, “ಭಗವಾನ್ ಪರಶುರಾಮ್ ಜಯಂತಿ ಮತ್ತು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಭಗವಾನ್ ಪರಶುರಾಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನ್ಯಾಯಯುತ, ಸಶಕ್ತ ಮತ್ತು ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಸಂಕಲ್ಪ ಮಾಡೋಣ” ಎಂದು ಹೇಳಿದರು.

ಅವರು, ಅಕ್ಷಯ ತೃತೀಯ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ಹೊಸ ಶಕ್ತಿಯನ್ನು ತರಲಿ ಎಂದು ಪ್ರಾರ್ಥಿಸಿದರು. ಜೊತೆಗೆ, ಭಗವಾನ್ ಪರಶುರಾಮರು ಅನ್ಯಾಯದ ವಿರುದ್ಧ ನಿಲ್ಲಲು ಮತ್ತು ಸತ್ಯದ ಹಾದಿಯಲ್ಲಿ ನಡೆಯಲು ಸ್ಫೂರ್ತಿ ನೀಡುತ್ತಾರೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸಂದೇಶದಲ್ಲಿ, ಧರ್ಮ ಮತ್ತು ನ್ಯಾಯದ ಸಂಕೇತವಾಗಿರುವ ಭಗವಾನ್ ಪರಶುರಾಮರ ಆಶೀರ್ವಾದದಿಂದ ದೇಶದ ಜನರಿಗೆ ಕಲ್ಯಾಣವಾಗಲಿ ಎಂದು ಹಾರೈಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನಕ್ಕೂ ಸಂತೋಷ, ಶಾಂತಿ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ ಎಂದು ಶುಭಾಶಯ ಕೋರಿದರು.

ರಕ್ಷಣಾ ಸಚಿವ ರಾಜನಾಥ ಸಿಂಗ್, ಭಗವಾನ್ ಪರಶುರಾಮರು ಜ್ಞಾನ ಮತ್ತು ಶೌರ್ಯದ ಸಂಕೇತ ಎಂದು ಬಣ್ಣಿಸಿದರು. ಅವರ ಕೃಪೆಯಿಂದ ಎಲ್ಲರೂ ಧೈರ್ಯ, ಕಲಿಕೆ ಮತ್ತು ಬುದ್ಧಿವಂತಿಕೆಯಿಂದ ಕೂಡಿದ ಜೀವನ ನಡೆಸಲಿ ಎಂದು ಹಾರೈಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಂದೇಶದಲ್ಲಿ, ಜನರ ಜೀವನದಲ್ಲಿ ಸಂತೋಷ, ಶಾಂತಿ, ಸಮೃದ್ಧಿ ಮತ್ತು ಸುಖ ನೆಲೆಸಲಿ ಎಂದು ಪ್ರಾರ್ಥಿಸಿದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚವ್ಹಾಣ, ನ್ಯಾಯ ಮತ್ತು ನೀತಿಯ ಮೂರ್ತರೂಪವಾದ ಭಗವಾನ್ ಪರಶುರಾಮರ ಅನುಗ್ರಹ ಮತ್ತು ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande