ಏ.21 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಏ.21 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ 110
ಏ.21 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ


ಬಳ್ಳಾರಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಏ.21 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವಿವಿಧ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ಎನ್.ಜೆ.ವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-11 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷಿ್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.

ಎಫ್-10 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿ್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.

ಎಫ್-4 ಐ.ಪಿ ಸೆಟ್ ಕರ್ಲಗುಂದಿ ಫೀಡರ್ ಮಾರ್ಗದ ಕರ್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡ, ವಿಜಯನಗರ ಕ್ಯಾಂಪ್ ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ, ಎಸ್ಆರ್ಕೆ ಲೇಔಟ್ 1 ಮತ್ತು 2 ಪ್ಯೂಪಿಲ್ ಟ್ರೀ ಸ್ಕೂಲ್, ಬಸವೇಶ್ವರ ಲೇ಼ಔಟ್, ಎನ್.ಆರ್ ರಾಮಮೂರ್ತಿ ಮತ್ತು ಡಾಕ್ಟರ್ ಕ್ಯಾಂಪ್. ಎಫ್-10 ಸಿಟಿ ಫೀಡರ್ ಮಾರ್ಗದ ವಕ್ರಾಣಿ ಕ್ಯಾಂಪ್.

ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್-02 ಗುಡುದೂರು ಐಪಿ ಮಾರ್ಗದ ಗುಡುದೂರು ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್ ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮಗಳು. ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳು. ಎಫ್-06 ತಾಳೂರು ಐಪಿ ಮಾರ್ಗದ ಹಡ್ಲಿಗಿ, ಹೀರೆ ಹಡ್ಲಿಗಿ, ಬರಸಕೋಡು, ತಾಳೂರು ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹಾಗಾಗಿ ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande