ನಾರಿ ಶಕ್ತಿ ವಂದನಾ ಅಧಿನಿಯಮ ; ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
ನಾಂಪಲ್ಲಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿ ನಡೆಸಿ, ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ ಮಹಿ
ಶೋಭಾ ಕರಂದ್ಲಾಜೆ


ನಾಂಪಲ್ಲಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿ ನಡೆಸಿ, ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೇಶದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಒದಗಿಸುವ ಉದ್ದೇಶದಿಂದ ತರಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ದ್ರೋಹ ಎಸಗಿದೆ ಎಂದು ಅವರು ಆರೋಪಿಸಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಒದಗಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಜಾರಿಗೆ ತಂದಿದೆ. ಆದರೆ, ಪ್ರಧಾನಿ ಮೋದಿ ಸರ್ಕಾರದ ಮೇಲಿನ ಕುರುಡು ವಿರೋಧದಿಂದ ಇಂಡಿ ಮೈತ್ರಿಕೂಟವು ಮಹಿಳೆಯರ ಆಶಯಗಳನ್ನು ನಿರ್ಲಕ್ಷಿಸಿದೆ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.

ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವಲ್ಲಿ ಬಿಜೆಪಿ ಸರ್ಕಾರದ ಬದ್ಧತೆ ಸ್ಪಷ್ಟವಾಗಿದ್ದು, ಕಾಂಗ್ರೆಸ್ ಪಕ್ಷದ ನಿಲುವು ಮಹಿಳಾ ವಿರೋಧಿಯಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande