
ವಿಜಯಪುರ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದಲ್ಲಿ ಹನುಮ ಜಯಂತಿ ಸಂಭ್ರಮದ ಆಚರಣೆ ನಡೆಯಿತು. ನಗರದ ವಜ್ರ ಹನುಮಾನ ದೇವಸ್ಥಾನದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಜೊತೆಗೆ ಹಲವಾರು ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande