
ಗುವಾಹಟಿ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಸ್ಸಾಂ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಪ್ರಮುಖ ಪಕ್ಷಗಳ ದಿಗ್ಗಜ ನಾಯಕರು ಪ್ರಚಾರ ಕಣಕ್ಕೆ ಇಳಿದಿದ್ದಾರೆ. ಈ ನಡುವೆ ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮತ್ತಷ್ಟು ವೇಗ ನೀಡಲಿದ್ದಾರೆ.
ಒಂದು ದಿನದ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಅವರು, ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಬೊಕಾಜನ್ ಹಾಗೂ ಜೋರ್ಹತ್ ಜಿಲ್ಲೆಯ ಟಿಟಾಬಾರ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಟು ದಿಮಾಪುರ ವಿಮಾನ ನಿಲ್ದಾಣಕ್ಕೆ ತಲುಪಿದ ಬಳಿಕ, ಹೆಲಿಕಾಪ್ಟರ್ ಮೂಲಕ ಬೊಕಾಜನ್ಗೆ ಪ್ರಯಾಣಿಸಿ ಮೊದಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಟಿಟಾಬಾರ್ನಲ್ಲಿ ನಡೆಯುವ ಮತ್ತೊಂದು ಪ್ರಮುಖ ಸಭೆಯಲ್ಲಿ ಮೇಲಿನ ಅಸ್ಸಾಂ ಭಾಗದ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾಂಗ್ರೆಸ್ ಪ್ರಚಾರ ಈಗಾಗಲೇ ಚುರುಕುಗೊಂಡಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರಚಾರ ಇನ್ನಷ್ಟು ತೀವ್ರಗೊಳ್ಳಲಿದ್ದು ಇದೆ. ಏಪ್ರಿಲ್ 5 ರಂದು ರಾಹುಲ್ ಗಾಂಧಿ ಅವರು ಮತ್ತೆ ಬೊಕಾಜನ್ ಹಾಗೂ ಧೇಮಾಜಿಯಲ್ಲಿ ಸಭೆ ನಡೆಸಲಿದ್ದು, ಏಪ್ರಿಲ್ 6 ರಂದು ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa