ಪ್ರಧಾನಿ ಭೇಟಿಯಾದ ನೀತಿ ಆಯೋಗದ ನೂತನ ಉಪಾಧ್ಯಕ್ಷ ಅಶೋಕ್ ಲಾಹಿರಿ
ನವದೆಹಲಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್ ಲಾಹಿರಿ ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಜನ್ಯವಾಗಿ ಭೇಟಿಯಾದರು. ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿದ ಅಧಿಸೂಚನೆಯ ಮೂಲಕ ಲಾಹಿರಿ
Lahire  met pm


ನವದೆಹಲಿ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್ ಲಾಹಿರಿ ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಜನ್ಯವಾಗಿ ಭೇಟಿಯಾದರು.

ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿದ ಅಧಿಸೂಚನೆಯ ಮೂಲಕ ಲಾಹಿರಿ ಅವರನ್ನು ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಿಸಿತ್ತು. ಈ ನೇಮಕದೊಂದಿಗೆ ಆಯೋಗದ ಹೊಸ ಪೂರ್ಣಕಾಲಿಕ ಸದಸ್ಯರ ತಂಡವನ್ನೂ ಘೋಷಿಸಲಾಗಿದೆ.

ಹೊಸ ತಂಡದಲ್ಲಿ ರಾಜೀವ್ ಗೌಬಾ, ಪ್ರೊ. ಕೆ. ವಿ. ರಾಜು, ಪ್ರೊ. ಗೋಬರ್ಧನ್ ದಾಸ್, ಪ್ರೊ. ಅಭಯ್ ಕರಂಡಿಕರ್ ಹಾಗೂ ಡಾ. ಎಂ. ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಸದಸ್ಯರಾಗಿ ಒಳಗೊಂಡಿದ್ದಾರೆ.

ಸರ್ಕಾರದ ಮಾಹಿತಿ ಪ್ರಕಾರ, ಈ ಎಲ್ಲ ನೇಮಕಾತಿಗಳು ಅಧಿಕಾರ ವಹಿಸಿಕೊಂಡ ದಿನಾಂಕದಿಂದಲೇ ಜಾರಿಗೆ ಬರುತ್ತವೆ ಮತ್ತು ಮುಂದಿನ ಆದೇಶದವರೆಗೆ ಮಾನ್ಯವಾಗಿರುತ್ತವೆ. ನೀತಿ ಆಯೋಗದಲ್ಲಿ ಈ ಹೊಸ ನೇಮಕಾತಿಗಳು ಕೇಂದ್ರ ಸರ್ಕಾರದ ನೀತಿ ರೂಪಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಉದ್ದೇಶವನ್ನು ಹೊಂದಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande