
ಸಂಡೂರು, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಠಲಾಪುರ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 33 ಕೆವಿ ಮತ್ತು 11 ಕೆವಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ 4 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿಠಾಲಾಪುರ, ಅಂತಾಪುರ, ಮೆಟ್ರಿಕಿ, ರಾಜಪುರ, ಸುಲ್ತಾನ್ಪುರ ಗ್ರಾಮಗಳ ಎನ್ಜೆವೈ ಮತ್ತು ಐಪಿ ಸೆಟ್ ಗ್ರಾಹಕರು ಮತ್ತು 33/11 ಕೆವಿ ವಿಠಲಾಪುರ ಮಾರ್ಗಕ್ಕೆ ಬರುವ ಎಲ್ಲಾ ಎಚ್ಟಿ ಮತ್ತು ಇಎಚ್ಟಿ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್