
ನವದೆಹಲಿ, 11 ಮೇ (ಹಿ.ಸ.) :
ಆ್ಯಂಕರ್ : ಸೋಮನಾಥ ದೇವಾಲಯದ ಪುನಃಸ್ಥಾಪನೆಗೆ 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, “ಶ್ರೀ ಸೋಮನಾಥ ದೇವಾಲಯವು ಭಾರತದ ಆಧ್ಯಾತ್ಮಿಕ ಪ್ರಜ್ಞೆ ಮತ್ತು ಅಚಲ ನಂಬಿಕೆಯ ಪ್ರಬಲ ಸಂಕೇತವಾಗಿದೆ” ಎಂದು ಅವರು ಹೇಳಿದ್ದಾರೆ.
“ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ‘ಸೋಮನಾಥ ಸ್ವಾಭಿಮಾನ್ ಪರ್ವ’ವನ್ನು ಆಚರಿಸುತ್ತಿದೆ. ಇದು ಭಾರತದ ಶಾಶ್ವತ ಶಕ್ತಿ, ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯ ಮಹೋತ್ಸವವಾಗಿದೆ” ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
“ಭಾರತದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತಷ್ಟು ಜಾಗೃತಗೊಳಿಸಿ ಶ್ರೀಮಂತಗೊಳಿಸುವ ನಮ್ಮ ಸಂಕಲ್ಪವನ್ನು ಬಲಪಡಿಸಲು ಇದು ಒಂದು ಮಹತ್ವದ ಅವಕಾಶವಾಗಿದೆ. ಭವಿಷ್ಯದ ಪೀಳಿಗೆಗಳಿಗೂ ಇದು ಸ್ಫೂರ್ತಿಯಾಗಲಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಗುಜರಾತ್ ನ ಗಿರ್ ಸೋಮನಾಥ ಜಿಲ್ಲೆಯಲ್ಲಿ ಇರುವ ಶ್ರೀ ಸೋಮನಾಥ ದೇವಾಲಯವು ದೇಶದ ಅತ್ಯಂತ ಪವಿತ್ರ ಜ್ಯೋತಿರ್ಲಿಂಗ ಕ್ಷೇತ್ರಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ. ಹಲವು ಬಾರಿ ದಾಳಿಗೆ ಒಳಗಾಗಿ ಧ್ವಂಸಗೊಂಡಿದ್ದ ಈ ದೇವಾಲಯವನ್ನು ಸ್ವಾತಂತ್ರ್ಯಾನಂತರ ಪುನಃ ನಿರ್ಮಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa