
ಕೋಲಾರ, ೧೪ ಮೇ (ಹಿ.ಸ)
ಆಂಕರ್ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಮಾತನಾಡಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಪ್ರತಿಭಟನೆ ಮಾಡಲಾಗುತ್ತಿದೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವು ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ವಾಡುತ್ತಿದ್ದು ದೇಶದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ವಿದ್ಯಾರ್ಥಿಗಳಿಗೆ ಇದರಿಂದಾಗಿ ಬಹಳ ಅನಾನುಕೂಲಗಳಾಗಿವೆ ಈ ಕೂಡಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ಮಾತನಾಡಿ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ತಯಾರಿ ಮಾಡಿಕೊಂಡಿದ್ದಾರೆ ಪದೇಪದೇ ನೀಟ್ ಪತ್ರಿಕೆ ಸೋರಿಕೆ ಯಾಗುವುದರಿಂದ ವಿದ್ಯಾರ್ಥಿಗಳು ಬಹಳಷ್ಟು ನೋವಿನಲ್ಲಿ ಇದ್ದಾರೆ ಇದಕ್ಕೆ ಕಾರಣವಾಗಿರುವ ಕೇಂದ್ರದ ಮೋದಿ ಸರ್ಕಾರವು ಇಂತಹ ಸಮಸ್ಯೆಯ ವಿರುದ್ದ ಧ್ವನಿಯಾಗಬೇಕು ಕೂಡಲೇ ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಇಲ್ಲದಿದ್ದರೆ ದೆಹಲಿಯ ಸಂಸತ್ತು ಭವನದ ಮುಂದೆ ದೇಶಾದ್ಯಂತ ಇರುವ ಯುವ ಕಾಂಗ್ರೆಸ್ ಘಟಕಗಳು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ಮುಖಂಡರಾದ ರೋಹಿತ್, ಯತೀಶ್, ಪ್ರಶಾಂತ್, ಗುಲಾಮ್, ಇಮ್ರಾನ್, ಫರೀದ್, ಮುಂತಾದವರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್