
ಶಿವಮೊಗ್ಗ, 17 ಮೇ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು. ನಿಯಮಾನುಸಾರ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಐಡಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ (ಹೆಸರು ಆಧಾರ್ನಲ್ಲಿರುವಂತೆ ಇರಬೇಕು), 15 ಅಂಕಿಗಳ ಆರ್ ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪ್ರಸ್ತುತ ವರ್ಷದ ಕಾಲೇಜು ಪ್ರವೇಶ ದಾಖಲಾತಿ ಸಂಖ್ಯೆ ಅಥವಾ ವಿಶ್ವವಿದ್ಯಾಲಯದ ನೋಂದಣಿ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಒಟಿಪಿ ಪರಿಶೀಲನೆಗಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಅಥವಾ https://swdhmis.karnataka.gov.in/ ಲಿಂಕ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕ (ಆಫ್ಲೈನ್) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ 24x7 ಸಹಾಯವಾಣಿ ಸಂಖ್ಯೆ: 9482300400 (ಕಲ್ಯಾಣ ಮಿತ್ರ) ಅಥವಾ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.