
ನವದೆಹಲಿ, 19 ಮೇ (ಹಿ.ಸ.) :
ಆ್ಯಂಕರ್ : ಭಾರತದ ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರ ಜನ್ಮದಿನದ ಸಂದರ್ಭದಲ್ಲಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೌರವ ಸಲ್ಲಿಸಿದ್ದಾರೆ.
ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಖರ್ಗೆ ಅವರು, ನೀಲಂ ಸಂಜೀವ ರೆಡ್ಡಿ ಅವರನ್ನು ಒಬ್ಬ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಅನುಭವಿ ರಾಜಕಾರಣಿ ಎಂದು ಸ್ಮರಿಸಿದ್ದಾರೆ. ರಾಷ್ಟ್ರೀಯ ಚಳವಳಿ ಮತ್ತು ಸಾರ್ವಜನಿಕ ಜೀವನಕ್ಕೆ ಅವರ ಕೊಡುಗೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅವರು ತಿಳಿಸಿದ್ದಾರೆ.
ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ ಅಪರೂಪದ ನಾಯಕರಾಗಿದ್ದರು ಎಂದು ಹೇಳಿದ ಖರ್ಗೆ, ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊಸದಾಗಿ ರೂಪುಗೊಂಡ ರಾಜ್ಯದ ಆಡಳಿತ ಮತ್ತು ಆಧುನೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಕೂಡ ಸ್ಮರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.