


ಕೊಪ್ಪಳ, 21 ಮೇ (ಹಿ.ಸ.) :
ಆ್ಯಂಕರ್ : ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಮಾಣ ವಚನ ಬೋಧಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಖಜಾನಾಧಿಕಾರಿಗಳಾದ ಕೆ.ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್