
ಬಳ್ಳಾರಿ, 21 ಮೇ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು. ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ವಿವಿಧ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್ಎಎಲ್ಎಸ್ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್