ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ : ಡಿ.ಕೆ. ಶಿವಕುಮಾರ್
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, “ಕೆಲವು ನಾಯಕರು ನೆ
DkS post


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, “ಕೆಲವು ನಾಯಕರು ನೆನಪುಗಳನ್ನು ಬಿಟ್ಟು ಹೋಗುತ್ತಾರೆ, ಆದರೆ ಕೆಲವರು ಪೀಳಿಗೆಗೆ ಮಾರ್ಗದರ್ಶನ ನೀಡುವ ದೃಷ್ಟಿಕೋನವನ್ನು ಬಿಟ್ಟು ಹೋಗುತ್ತಾರೆ” ಎಂದು ಹೇಳುವ ಮೂಲಕ ರಾಜೀವ್ ಗಾಂಧಿ ಅವರ ದೂರದೃಷ್ಟಿಯ ನಾಯಕತ್ವವನ್ನು ಕೊಂಡಾಡಿದ್ದಾರೆ.

ತಂತ್ರಜ್ಞಾನ, ನಾವೀನ್ಯತೆ ಹಾಗೂ ಯುವಜನರ ಆಕಾಂಕ್ಷೆಗಳ ಆಧಾರದ ಮೇಲೆ ಆಧುನಿಕ ಭಾರತವನ್ನು ನಿರ್ಮಿಸುವ ಕನಸನ್ನು ರಾಜೀವ್ ಗಾಂಧಿ ಕಂಡಿದ್ದರು. ಅವರ ನಾಯಕತ್ವವೇ ದೇಶದ ಪರಿವರ್ತನೆಗೆ ಭದ್ರ ಅಡಿಪಾಯ ಹಾಕಿತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಜೀವನದ ಆರಂಭಿಕ ಹಂತದಲ್ಲಿ ರಾಜೀವ್ ಗಾಂಧಿ ನೀಡಿದ ಮಾರ್ಗದರ್ಶನ ಮತ್ತು ಪ್ರೋತ್ಸಾಹಕ್ಕಾಗಿ ತಾವು ಸದಾ ಕೃತಜ್ಞರಾಗಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ. ಯುವ ನಾಯಕರ ಮೇಲಿನ ಅವರ ನಂಬಿಕೆ ಹಾಗೂ ಕರ್ನಾಟಕದೊಂದಿಗಿನ ಅವರ ಆತ್ಮೀಯ ಬಾಂಧವ್ಯ ಸದಾ ಹೃದಯಕ್ಕೆ ಹತ್ತಿರವಾಗಿರುತ್ತದೆ ಎಂದು ಹೇಳಿದ್ದಾರೆ.

ರಾಜೀವ್ ಗಾಂಧಿ ಅವರ ಚಿಂತನೆಗಳು ಮತ್ತು ನಾಯಕತ್ವ ಇಂದಿಗೂ ದೇಶದ ಯುವಜನತೆಗೆ ಪ್ರೇರಣೆಯಾಗಿ ಉಳಿದಿವೆ ಎಂದು ಡಿ.ಕೆ. ಶಿವಕುಮಾರ್ ಸ್ಮರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande