
ಕೋಲಾರ, ಮೇ ೨೩ (ಹಿ.ಸ) :
ಆ್ಯಂಕರ್ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೫-೨೬ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಮೇ ೨೪ರ ಸೋಮವಾರ ಬೆಳಗ್ಗೆ ೧೦-೩೦ ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮ0ದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಡಾ.ಕೊತ್ತೂರು ಜಿ.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮುನಿಶಾಮಪ್ಪ ಎ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ನಜೀರ್ ಅಹಮದ್, ಡಿ.ಟಿ ಶ್ರೀನಿವಾಸ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಬಿ.ಕೆ.ರವಿ, ಅಂತರರಾಷ್ಟಿçÃಯ ದೇಹದಾರ್ಢ್ಯ ಕ್ರೀಡಾಪಟು ಎ.ವಿ.ರವಿ, ಐ.ಕ್ಯೂ.ಎ.ಸಿ ಸಂಚಾಲಕಿ ಡಾ.ಶೈಲಜಾ ಕೆ.ಎಸ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಚೆಲುವರಾಜು ಭಾಗವಹಿಸುವರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್